ಬಂಟ್ವಾಳ: ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ *ಮುಳಿಯ ಪ್ರಾಪರ್ಟೀಸ್ನವರ 7.5 ಸೆಂಟ್ಸ್ ಮೇಲ್ಪಟ್ಟ ಸುಮಾರು 44 ಪ್ಲಾಟ್ ಗಳಿರುವ “ಸದಾಶಿವ ಭಾಗ್” ಫಾರ್ಮುಲಾಂಡ್ ಪ್ರೊಜೆಕ್ಟ್ಟ ಉದ್ಘಾಟನೆಗೊಂಡಿತು.

ಹೊಸನಗರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಗಳು ಭೂಮಿ ಪೂಜೆ ನೆರವೇರಿಸಿ, ಆಶೀರ್ವಚನ ನೀಡಿ, ಪ್ರಕೃತಿದತ್ತ ವಸತಿ ವ್ಯವಸ್ಥೆಯೊಂದಿಗೆ ಇಲ್ಲಿ ಗೋಶಾಲೆ ಕೂಡ ಮಾಡುತ್ತಿರುವುದು ಮುಳಿಯ ಮನೆತನದ ಸಾಮಾಜಿಕ -ಧಾರ್ಮಿಕ ಅಭಿರುಚಿಯ ಉನ್ನತೆ ಮತ್ತು ಜವಾಬ್ದಾರಿಯನ್ನು ತಿಳಿಸುತ್ತದೆ ಎಂದರು.
ಡಾ. ಕಲ್ಲಡ್ಕ ಪ್ರಭಾಕರ ಭಟ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಸನಾತನ ಧರ್ಮದ ಪ್ರಜ್ಞೆಯೊಂದಿಗೆ ಪ್ರಕೃತಿಯೊಂದಿಗೆ ಬದುಕು ಎನ್ನುತ್ತಿರುವ ಈ ಪ್ರಾಜೆಕ್ಟ್ ನಮ್ಮ ಕಲ್ಲಡ್ಕ ಶಾಲೆಯ ಹತ್ತಿರ ಬಂದಿರುವುದು ಸಂತಸದ ವಿಚಾರ ಎಂದರು.
ಹತ್ತು ಎಕರೆ ಭೂಮಿಯಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಪ್ರಕೃತಿದತ್ತವಾದ ಫಾರ್ಮುಲಾಂಡ್ಸ್ ಗಳ ಮತ್ತು ಫಾರಂ ಹೌಸ್ ಗಳ ಯೋಜನೆ ಇದಾಗಿದೆ ” …
























