ಪುತ್ತೂರು: ಕಬಕ – ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲು ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಈ ರೈಲು ಯೋಜನೆಯನ್ನು ವಿಸ್ತರಿಸಲು ಸಂಸದರು ಅವಿರತ ಪ್ರಯತ್ನಪಡುತ್ತಿದ್ದು, ಸೋಮವಾರ ದೆಹಲಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಅವರನ್ನು ಭೇಟಿಯಾಗಿ ಕಬಕ-ಪುತ್ತೂರು ಪ್ಯಾಸೆಂಜರ್ ರೈಲು (06485) ವನ್ನು ಸುಬ್ರಹ್ಮಣ್ಯ ಜಂಕ್ಷನ್ವರೆಗೆ ವಿಸ್ತರಿಸುವ ಪ್ರಸ್ತಾವನೆಯ ಬಗ್ಗೆ ಪ್ರಗತಿ ಮತ್ತು ಇದನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಮನವಿ ಮಾಡಿದರು.
ಬಹು ಕಾಲದ ಬೇಡಿಕೆಯ ಈಡೇರಿಕೆಗೆ ನಾನಾ ರೀತಿಯಲ್ಲಿ ಪ್ರಯತ್ನ ಪಡುತ್ತಿರುವ ನಮ್ಮ ಸಂಸದರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.