ಪುತ್ತೂರಿನ ಯುವಕ ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಮೃತ್ಯು | ಮೃತದೇಹ ಭಾರತಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲು ಶಾಸಕ ಸಂಜೀವ ಮಠಂದೂರು ಒತ್ತಾಯ

ಪುತ್ತೂರು: ಬನ್ನೂರು ಆರ್.ಟಿ.ಓ. ಕಚೇರಿ ಬಳಿಯ ನಿವಾಸಿ ಸುಬ್ರಹ್ಮಣ್ಯ ಟಿ.ಎ. ಅವರು ಅಮೆರಿಕಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತದೇಹವನ್ನು ಭಾರತಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಸೂಕ್ತ ಸೂಚನೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯನ್ನು ಒತ್ತಾಯಿಸಿದ್ದಾರೆ.

ಪುತ್ತೂರು ನಗರಸಭೆ ವ್ಯಾಪ್ತಿಗೆ ಒಳಪಟ್ಟ ಬನ್ನೂರು ಸಮೀಪದ ನಿವಾಸಿ ಟಿ. ಅನಂತಕೃಷ್ಣ ಭಟ್ ಅವರ ಪುತ್ರ ಸುಬ್ರಹ್ಮಣ್ಯ ಟಿ.ಎ. (30 ವ.) ಮೃತಪಟ್ಟ ಯುವಕ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಬ್ರಹ್ಮಣ್ಯ ಟಿ.ಎ. ಅವರು ಮೃತಪಟ್ಟಿರುವುದಾಗಿ ಮನೆಯವರಿಗೆ ಮಾಹಿತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯವರು ಶಾಸಕ ಸಂಜೀವ ಮಠಂದೂರು ಅವರನ್ನು ಸಂಪರ್ಕಿಸಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಅಗತ್ಯ ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ರವಾನಿಸಿರುವ ಶಾಸಕರು, ತನ್ನ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಯುವಕ ಮೃತಪಟ್ಟಿದ್ದಾರೆ. ಆದ್ದರಿಂದ ಮೃತದೇಹವನ್ನು ಭಾರತಕ್ಕೆ ತರಲು ಅಗತ್ಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top