ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ

ಮುಲ್ಕಿ: ದುಷ್ಕರ್ಮಿಗಳ ತಂಡವೊಂದು ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದು, ಮಕ್ಕಳ ಧೈರ್ಯ ಕಂಡು ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.

ಕಾರಿನಲ್ಲಿ ಬಂಡ ತಂಡ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಮಕ್ಕಳಿಗೆ ಚಾಕೊಲೇಟ್ ಅಸೆ ತೋರಿಸಿ ಕಾರಿನಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ. ಇದಕ್ಕೆ ಮಕ್ಕಳು ಬಗ್ಗಲಿಲ್ಲ, ಕೂಡಲೇ ತಂಡದಲ್ಲಿ ಒಬ್ಬ ಚಾಕು ತೋರಿಸಿದಾಗ ಮಕ್ಕಳು ಧೈರ್ಯದಿಂದ ಶಾಲೆಗೆ ಓಡಿ ಹೋಗಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ.

ಶಾಲಾ ಪ್ರಾಂಶುಪಾಲರು ಸಹಿತ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾಗಿದೆ. ಮಕ್ಕಳ ಧೈರ್ಯಕ್ಕೆ ಮೆಚ್ಚಿದ್ದು, ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

































 
 

ದುಷ್ಕರ್ಮಿಗಳು ಆಗಮಿಸಿದ ಕಾರಿನಲ್ಲಿ ಮದ್ಯದ ಬಾಟಲ್‌ಗಳನ್ನು ಮಕ್ಕಳು ನೋಡಿದ್ದು, ಪೊಲೀಸರು ಶಾಲಾ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಶಾಲಾ ಮಕ್ಕಳ ಕಿಡ್ನಾಪ್‌ಗೆ ಯತ್ನಿಸಿದ ಬಗ್ಗೆ ಪೋಷಕರಲ್ಲಿ ಆತಂಕ ಉಂಟಾಗಿದ್ದು ಕೂಡಲೇ ಪೊಲೀಸರು ಕಾರ್ಯ ಪ್ರವೃತ್ತರಾಗಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಅಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top