ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ತೆಂಗಿನಮರ ಬಿದ್ದರಿಂದ ಕಾರ್ಮಿಕರೊಬ್ಬರಿಗೆ ಗಂಭೀರ ಗಾಯ ಉಂಟಾಗಿದೆ.
ದೇವಸ್ಥಾನದ ನಿತ್ಯ ಕಾರ್ಮಿಕನಾಗಿದ್ದರು ಎಂದು ತಿಳಿದುಬಂದಿದೆ.
ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದ್ದು, ರವಿ (35) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ತಕ್ಷಣ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.