ಹಾಸನ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಯಾತ್ರಿಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ನಾಡಿನೆಲ್ಲೆಡೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಆಗಮಿಸುವುದು ವಾಡಿಕೆ.
ಸುರೇಶ್ (60) ಮತ್ತು ಕುಮಾರ್ (55) ಬಸ್ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ, ಕೆ.ಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಗಂಭೀರ ಗಾಯಗೊಂಡ ದಿನೇಶ್ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮುಂಜಾನೆ ಧರ್ಮಸ್ಥಳಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಧರ್ಮಸ್ಥಳಕ್ಕೆ ಬರುತ್ತಿದ್ದ ಪಾದಯಾತ್ರಿಗಳಿಗೆ ಬಸ್ ಡಿಕ್ಕಿ : ಇಬ್ಬರು ಸಾವು
