ಬೆಂಗಳೂರು: ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆಯಾಗಬೇಕಿರುವುದರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯ ಕುರಿತು ಸಚಿವೆ ಪ್ರತಿಕ್ರಿಯೆ ನೀಡಿ, ಘಟನೆಯನ್ನು ನಾನು ಖಂಡಿಸುತ್ತೆನೆ. ಘಟನೆ ನಡೆದು ಐದೇ ನಿಮಿಷಕ್ಕೆ ಕಮಿಷನರ್ ಜೊತೆ ನಾನು ಮಾತನಾಡಿದ್ದೆ.
ತಪ್ಪಿತಸ್ಥರಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ನಾವೆಲ್ಲರೂ ಮೊದಲು ಭಾರತೀಯರು ಕನ್ನಡಿಗರು ಸ್ವರಾಜ್ಯದ ಬಗ್ಗೆ ಮಾತನಾಡಿದಾಗ ನಾಲ್ಕೈದು ಪುಂಡರು ಬಂದು ಭಾಷಾ ವಿವಾದ ಎಳೆದು ರಾಜಕೀಯ ಬೇಳೆ ಬೇಯಿಸಿಕೊಳ್ತಿದ್ದಾರೆ. ಇದನ್ನು ಖಂಡಿಸುತ್ತೆನೆ ಎಂದಿದ್ದಾರೆ.