ಕೆದಿಲ : ಬಂಟ್ವಾಳ ತಾಲೂಕು, ಕೆದಿಲ ಗ್ರಾಮದ ಲಕ್ಷ್ಮಿ ವಿಶ್ವನಾಥ ಮಡಿವಾಳ ಕುಕ್ಕಾಜೆ ಮತ್ತು ಕುಸುಮಾವತಿ ಚೆನ್ನಪ್ಪ ಗೌಡ ಮುದ್ರಾಜೆ ಇವರು ಅಸೌಖ್ಯಂದಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇನ್ಲೆಸ್ ಫಂಡ್ ಅನ್ನು ಫೆ.24 ಸೋಮವಾರದಂದು ವಿತರಿಸಲಾಯಿತು.
ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ಮತ್ತು ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ ಕ್ರಿಟಿಕಲ್ ಇನ್ಲೆಸ್ ಫಂಡ್ ವಿತರಿಸಿದರು.
ಈ ಸಂದರ್ಭದಲ್ಲಿ ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ ಶಾರದಾ, ಕೆದಿಲ “B” ಒಕ್ಕೂಟದ ಸೇವಾಪ್ರತಿನಿಧಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕೆದಿಲದ ಜಗದೀಶ, ವೆಂಕಪ್ಪ , ಶೀನಪ್ಪ, ಗಿರೀಶ ಉಪಸ್ಥಿತರಿದ್ದರು.