ಸುಳ್ಯ: ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೊಪರೆಟಿವ್ ಸೊಸೈಟಿಯ ಪೂರ್ವಾಧ್ಯಕ್ಷ, ಹಾಲಿ ನಿರ್ದೇಶಕ, ದ.ಕ. ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರಾಗಿರುವ ಸಹಕಾರಿ ರತ್ನ ಪುರಸ್ಕೃತ ರಾದ ಚಂದ್ರ ಕೋಲ್ಚಾರ್ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಮಾ.15 ರಂದು ಸಂಜೆ ಸುಳ್ಯ ಲಯನ್ಸ್ ಕ್ಲಬ್ನಲ್ಲಿ ನಡೆಯಲಿದೆ.

ಅಭಿನಂದಿಸುವ ನಿಟ್ಟಿನಲ್ಲಿ ಈಗಾಗಲೇ ಅವರ ಹಿತೈಷಿ ಬಳಗ ಅಭಿನಂದನಾ ಸಮಿತಿಯನ್ನು ರಚಿಸಿದ್ದಾರೆ.
ಸಮಿತಿಯ ಅಧ್ಯಕ್ಷರಾಗಿ ಸುಳ್ಯ ಸೂಂತೋಡು ಎಂಪೋರಿಯಂ ಮಾಲಕ ಸೂರಯ್ಯ ಗೌಡ ಎಸ್.ಆರ್., ಕಾರ್ಯದರ್ಶಿಯಾಗಿ ದಿನೇಶ್ ಕೋಲ್ಚಾರ್, ಸಂಚಾಲಕರಾಗಿ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿಯಾಗಿ ಕೆ.ಟಿ.ವಿಶ್ವನಾಥ ಹಾಗೂ ಉಪಾಧ್ಯಕ್ಷರಾಗಿ ಪುರುಷೋತ್ತಮ ಕೋಲ್ಚಾರು, ದೊಡ್ಡಣ್ಣ ಬರಮೇಲು, ಚಂದ್ರಶೇಖರ ಪೇರಾಲು, ತಿಮ್ಮಯ್ಯ ಪಿಂಡಿಮನೆ, ಮತ್ತು ಜತೆ ಕಾರ್ಯದರ್ಶಿ ಗಳಾಗಿ ಸುಪ್ರೀತ್ ಮೋಂಟಡ ಮತ್ತು ಪ್ರೀತಮ್ ಡಿ.ಕೆ.ಯವರು ಆಯ್ಕೆಯಾಗಿದ್ದಾರೆ.