ಪಡಂಗಡಿ : ನವವಿವಾಹಿತೆ ನೇಣುಬಿಗಿದುಕೊಂಡಿರುವ ಘಟನೆ ಮಾ.1ರಂದು ಬೆಂಗಳೂರಿನಲ್ಲಿರುವ ಸಂಬಂದಿಕರ ಮನೆಯಲ್ಲಿ ನಡೆದಿದೆ.
ನೇಣುಬಿಗಿದು ಆತ್ಮೆಹತ್ಯೆ ಮಾಡಿಕೊಂಡವರು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ರವರ ಪತ್ನಿ ಪೂಜಾಶ್ರೀ ಎನ್ನಲಾಗಿದೆ.
ಕೆಲಸ ಹುಡುಕುತ್ತಿದ್ದ ಪೂಜಾಶ್ರೀಯರನ್ನು ಪತಿ ಪ್ರಕಾಶ್ ರವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್ ಬದ್ಯಾರು ಗ್ರಾಮದ ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು, 10 ತಿಂಗಳ ಹಿಂದೆ ಇವರ ವಿವಾಹವಾಗಿತ್ತು. ಪೂಜಾ ಸಾವಿನ ಬಗ್ಗೆ ಸಂಶಯವಿದೆ ಎಂದು ಹೆತ್ತವರು ಆರೋಪಿಸಿದ್ದಾರೆ. ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























