ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಿನ್ನೆ ಗುಡ್ಡಕ್ಕೆ ಬೆಂಕಿ ಬಿದ್ದಿದ ಘಟನೆ ನಡೆದಿದೆ.
ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಹಿನ್ನಲೆ ಬೆಂಕಿ ಹೊತ್ತಿಕೊಂಡಿದೆ ಎಂದು ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಕೊಂಡಿದೆ.
ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.