ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾಗಿದ್ದು ಪರಿಣಾಮ ದ್ಚಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಘಟನೆ ಇಂದು ಸಂಜೆ ನಡೆದಿದೆ.
ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ.
ಕಾರ್ಯ ನಿಮಿತ್ತ ಕೃಷ್ಣ ಭಟ್ ಅವರು ಪಂಜದಿಂದ ಪುತ್ತೂರಿಗೆ ಬೈಕ್ ನಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ, ಬೈಕ್ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು, ಇದನ್ನು ಗಮನಿಸಿಯೂ, ಯಾವುದೇ ಮಾನವೀಯತೆಯನ್ನೂ ತೋರಿಸದೆ, ಪಿಕಪ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರು ತಾಯಿ, ಪತ್ನಿ ಪುತ್ರ ಪುತ್ರಿಯನ್ನು ಅಗಲಿದ್ದಾರೆ.