ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಜಾತ್ರೆಗೆ ಬ್ರಹ್ಮರಥ ಮಂದಿರದಿಂದ ರಥವನ್ನು ಹೊರ ತರುವ ಮುಹೂರ್ತ | ರಥ ಕಟ್ಟುವ ಸ್ಥಳ ಸೂಚಿಸಿದ ಪುಷ್ಪ

ಪುತ್ತೂರು: ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.17ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತಂದು ನಿಲ್ಲಿಸುವ ಮೂಲಕ ಪುತ್ತೂರು ಜಾತ್ರೆಗೆ ಮುನ್ಸೂಚನೆ ನೀಡಲಾಗಿದೆ. ಪ್ರತಿ ವರ್ಷದಂತೆ ರಥ ಕಟ್ಟುವ ಸ್ಥಳದಲ್ಲಿ ಬಿಲ್ವಪತ್ರೆ ಭೂಸ್ಪರ್ಶ ಮಾಡುತ್ತಿದ್ದು, ಈ ಭಾರಿ ಪುಷ್ಪದ ಮಾಲೆಯೊಂದು ಭೂ ಸ್ಪರ್ಶ ಮಾಡಿದೆ.

ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ದೇವಳದ ವಾಸ್ತು ಇಂಜಿನಿಯರ್ ಆಗಿರುವ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಮಾರ್ಗದರ್ಶನದಲ್ಲಿ ಆರಂಭದಲ್ಲಿ ದೇವಳದ ನೌಕರರು ರಥದ ಹಿಂಬದಿಯ ಚಕ್ರಕ್ಕೆ ದಂಡೆ ಇಟ್ಟು ಚಕ್ರಕ್ಕೆ ಚಾಲನೆ ನೀಡಿದರು. ಬ್ರಹ್ಮರಥವನ್ನು ಕ್ರೈನ್ ಸಹಾಯದಿಂದ ಹೊರಗೆಳೆಯುವ ಕೆಲಸ ನಿರ್ವಹಿಸಲಾಯಿತು. ದೇವಾಲಯದ ಕೆಲಸಗಾರರು ಸೇರಿ ಬ್ರಹ್ಮರಥವನ್ನು ರಥಬೀದಿಗೆ ತಂದು ನಿಲ್ಲಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೃಷ್ಣವೇಣಿ, ವಿನಯ ಸುವರ್ಣ, ದಿನೇಶ್ ಪಿ.ವಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೇಡೆಕರ್‌, ಮಾಜಿ ಸದಸ್ಯ ರಾಮದಾಸ್ ಗೌಡ, ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಸ್ಯಾಕ್ಸೋಪೋನ್ ವಾದಕ ಪಿ.ಕೆ.ಗಣೇಶ್, ಪಿ.ಜಿ.ಚಂದ್ರಶೇಖರ್, ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್ ಎಂ, ವಿಶ್ವನಾಥ್ ನಾಯಕ್, ದೇವತಾ ಸಮಿತಿ ಅಧ್ಯಕ್ಷ ಅಭಿಜೀತ್‌ ಶೆಟ್ಟಿ, ವರುಣ್ ಪಂಜಿಗುಡ್ಡೆ ಸಹಿತ ದೇವಳದ ಭದ್ರ ಸಿಬ್ಬಂದಿ, ನೌಕರರು ಉಪಸ್ಥಿತರಿದ್ದರು.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top