ವಿದ್ಯಾರಶ್ಮಿಯಲ್ಲಿ 11ವರ್ಷ ಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಸೀತಾರಾಮ ಕೇವಳ |  ಸ್ವಯಂ ಸೇವಾ ನಿವೃತ್ತಿ ಪಡೆದ ಸೀತಾರಾಮ ಕೇವಳ

ಪುತ್ತೂರು : ಸವಣೂರಿನ ವಿದ್ಯಾರಶ್ಮಿಯಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವಾನಿರತರಾಗಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕ ಸೀತಾರಾಮ  ಕೇವಳ ಅವರು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ.

1988ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ದ್ವಿತೀಯ rankನೊಂದಿಗೆ ತೇರ್ಗಡೆಯಾದ ಅವರು ಮುಂದೆ ಕುವೆಂಪು ವಿಶ್ವ ವಿದ್ಯಾನಿಲಯದಿಂದ ಇಂಗ್ಲೀಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು.

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದ ಅವರು 1990ರಲ್ಲಿ  ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವಾರಂಭ ಮಾಡಿದ ಅವರು ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಮುಂದುವರಿಸಿದ ಅವಧಿಯಲ್ಲಿ ಕುಂಬ್ರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೂ ಸೇವೆ ಸಲ್ಲಿಸಿದ್ದರು. 1996ರಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡಿದ್ದರು. ಮುಂದೆ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಮತ್ತು ಪುತ್ತೂರಿನ ಇಂಡಸ್ ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2014 ಮೇ 15ರಿಂದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವಾನಿರತರಾಗಿದ್ದರು.

































 
 

ಜೇಸೀ ಸಂಸ್ಥೆಯ ಅಂತಾರಾಷ್ಟ್ರೀಯ ತರಬೇತುದಾರರಾಗಿರುವ ಕೇವಳರು ನ್ಯೂಸ್ ಪುತ್ತೂರು ಸಂಸ್ಥೆಯ ಅಧ್ಯಕ್ಷರಾಗಿ ಸೇವೆಯನ್ನು ಮುಂದುವರಿಸಲಿದ್ದಾರೆ.

ಮಾರ್ಚ್ 19ರಂದು ಆಯೋಜನೆಗೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರಿನ ಶಿಲ್ಪಿ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರು ಕೇವಳರನ್ನು ಸನ್ಮಾನಿಸಿ ಬೀಳ್ಕೊಟ್ಟರು.

ಇದೇ ಸಂದರ್ಭದಲ್ಲಿ ಸೀತಾರಾಮ ಕೇವಳ ಅವರು ಶಾಂತಿಗೋಡಿನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಕುಟುಂಬದ ಉದ್ಯಮವಾದ ನ್ಯೂಜೆನ್ ಎಂಟರ್ ಪ್ರೈಸಸ್ ನ ಉತ್ಪನ್ನವಾದ export qualityಯ ಅಡಿಕೆ ಹಾಳೆ ತಟ್ಟೆಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಅವರಿಗೆ ಮತ್ತು ವೇದಿಕೆಯಲ್ಲಿನ ಎಲ್ಲರಿಗೂ ಉಡುಗೊರೆಯಾಗಿ ನೀಡಿದರು. ಬಳಿಕ ನೆರೆದಿದ್ದ ಎಲ್ಲಾ ಸಿಬ್ಬಂದಿಗಳಿಗೂ ಸೀತಾರಾಮ ರೈಯವರು ವಿತರಿಸಿದರು.

ಆಡಳಿತಾಧಿಕಾರಿ ನ್ಯಾಯವಾದಿ, ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿಯವರು ಮಾತನಾಡಿ ಕೇವಳರ ಆಂಗ್ಲ ಭಾಷಾ ಪ್ರಬುದ್ಧತೆ, ಪಾಠದ ಶೈಲಿ ಮತ್ತು ವ್ಯವಹಾರ ಜ್ಞಾನ ತುಂಬಾ ಚೆನ್ನಾಗಿತ್ತು. ಅವರು ಹೇಳಿಕೊಟ್ಟ ವಿಚಾರಗಳನ್ನು ಇತರ ಶಿಕ್ಷಕರು ಅನುಸರಿಸಿದಲ್ಲಿ ಒಳ್ಳೆಯದಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮಿ ಅಶ್ವಿನ್ ಶೆಟ್ಟಿ, ಕನ್ನಡ ಭಾಷಾ ಉಪನ್ಯಾಸಕಿ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಶಾಲಾ ವಿಭಾಗದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ವಿದ್ಯಾರಶ್ಮಿ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ರಾಜಲಕ್ಷ್ಮಿ ಎಸ್. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತ ಶಿಕ್ಷಕಿ ಮತ್ತು ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಲೇಖಾ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಥಮಿಕ ಶಾಲಾ ವಿಭಾಗದ ಸಂಯೋಜಕಿ ಶೀಲಾವತಿ ಅವರು ವಂದಿಸಿದರು. ಇಂಗ್ಲೀಷ್ ಭಾಷಾ ಶಿಕ್ಷಕಿ ತೇಜಸ್ವಿ ರೈ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top