ಪುತ್ತೂರು: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೈಸೂರು ಸರಸ್ವತಿಪುರಂ ಎನ್.ಎಸ್.ಎಸ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಬಹುಮಾನ ಪಡೆದುಕೊಂಡಿದ್ದಾರೆ.
ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ಸಾಮೂಹಿಕ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಕಿರುನಾಟಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ.
ವರ್ಷಿಣಿ ಎಸ್. ಎನ್ .ಸುರೇಶ್ ಆಚಾರ್ಯ ಹಾಗೂ ವಾಣಿ ಎ. ದಂಪತಿ ಪುತ್ರಿ. ಇವರಿಗೆ ಸಂಸ್ಥೆಯ ಅಧ್ಯಕ್ಷ ಜಯಂತ್ ನಡುಬೈಲು, ಪ್ರಾಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ. ಎ., ಮಂಗಳೂರು ವಿ.ವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ.ಶೇಷಪ್ಪ ಕೆ., ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಮೇಘಶ್ರೀ ಹಾಗೂ ಬೋಧಕ- ಭೋದಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.