ಮೂಡುಬಿದಿರೆ: ಚಿರತೆಯೊಂದು ಬಾವಿಗೆ ಬಿದ್ದಿದ್ದರಿಂದ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಚಿರತೆಯು ಅಯತಪ್ಪಿ ಬಿದ್ದಿದೆ. ಇದನ್ನು ರಕ್ಷಿಸಲೆಂದು ಅರಣ್ಯಾಧಿಕಾರಿಗಳು ಮನೆಗೆ ಬಂದಿದ್ದರು.
ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ರವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕಾವ್ಯಾ ಆರ್., ರಾಘವೇಂದ್ರ ಶೆಟ್ಟಿ, ಬಸಪ್ಪ ಹಲಗೇರ, ಗಸ್ತು ಅರಣ್ಯ ಪಾಲಕರಾದ ಧರ್ಮರಾಜ, ಮಂಜುನಾಥ ಮಳ್ಳಿ, ರಾಜೇಶ್, ಚಂದ್ರಶೇಖರ್, ಅರಣ್ಯ ವೀಕ್ಷಕರಾದ ಜನಾರ್ದನ, ರಂಜನ್, ವಾಹನ ಚಾಲಕ ಮಿಥುನ್ ಕಾರ್ಯಾಚರಣೆಯಲ್ಲಿ ಕೈ ಜೋಡಿಸಿದ್ದಾರೆ.