ಸಂಧಾನ ವಿಫಲ : ಮೂರನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಮುಖ್ಯಮಂತ್ರಿ ಮನವೊಲಿಕೆಗೂ ಬಗ್ಗದ ಲಾರಿ ಮಾಲೀಕರು

ಬೆಂಗಳೂರು : ಮುಷ್ಕರ ಹೂಡಿರುವ ಲಾರಿ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಡೆಸಿದ ಸಂಧಾನ ಸಭೆ ವಿಫಲಗೊಂಡಿದ್ದು, ಲಾರಿ ಮುಷ್ಕರ ಮುಂದುವರಿದಿದೆ. ಏರಿಸಿದ ಡೀಸೆಲ್ ದರ ಇಳಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ.
ಹೀಗಾಗಿ ಮತ್ತೊಮ್ಮೆ ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ. ಮುಖ್ಯಮಂತ್ರಿಗಳು ಮುಷ್ಕರ ಹಿಂಪಡೆಯಲು ಹೇಳಿದರು, ಆಗಲ್ಲ ಅಂದ್ವಿ. ಅನಿರ್ದಿಷ್ಟಾವಧಿ ಉಗ್ರ ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ.
ಆಟೋ, ರಿಕ್ಷಾದಂತೆ ಲಾರಿ ಮಾಲೀಕರಿಗೆ ಬಾಡಿಗೆ ದರ ಫಿಕ್ಸ್​ ಮಾಡಬೇಕು. ಡೀಸೆಲ್ ದರ ಎಷ್ಟಾದರೂ ಏರಿಕೆ ಮಾಡಲಿ, ಆದರೆ ಫಿಕ್ಸ್ ರೇಟ್​​ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೇರವಾಗಿ ಹೇಳಿದ್ದೇವೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ ಎಂದಿದ್ದಾರೆ.































 
 

ಡೀಸೆಲ್ ದರ ಇಳಿಸುವಂತೆ, ಟೋಲ್ ದರ ತೆಗೆಯುವಂತೆ ಲಾರಿ ಮಾಲೀಕರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದು, ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಹಳೆಯ ವೆಹಿಕಲ್ ಫಿಟ್ನೆಸ್‌ ಸರ್ಟಿಫಿಕೆಟ್‌ ಡ್ರಾಫ್ಟ್‌ನಲ್ಲಿದ್ದು, ಇನ್ನೂ ಅಂತಿಮವಾಗಿಲ್ಲ. ದರ ನಿಗದಿ ವೇಳೆ ಸಭೆ ಕರೆಯುವುದಾಗಿ ಹೇಳಿದ್ದೇನೆ. ಕೆಲ ರಾಜ್ಯಗಳಲ್ಲಿ ಚೆಕ್‌ಪೋಸ್ಟ್‌ ತೆಗೆದಿದ್ದಾರೆ. ಆ ರಾಜ್ಯಗಳಲ್ಲಿ ಅಧ್ಯಯನ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಮೂರು ತಿಂಗಳ ಸಮಯ ಕೇಳಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೆಳಿದ್ದಾರೆ.

ಮೊದಲಿಗೆ ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದರು. ಆದರೆ, ಮೊದಲ ಸಭೆ ವಿಫಲವಾದ ನಂತರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲಾರಿ ಮಾಲೀಕರ ಸಂಘದ ಜೊತೆ ಸಭೆ ನಡೆಸಿದರು. ಈ ಸಭೆ ವಿಫಲವಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top