ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.
ಮೃತರನ್ನು ರಮೇಶ್(45) ಎನ್ನಲಾಗಿದೆ. ರಮೇಶ್ ರವರು ಉತ್ತಮ ಕ್ರೀಡಾ ಸಂಘಟಕ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಿಂದೂ ಹಿತರಕ್ಷಣಾ ಸಮಿತಿಯ ಸಂಘಟಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಸಾಲೆತ್ತೂರಿನಲ್ಲಿ ಆಚರಿಸಲು ಶ್ರಮ ವಹಿಸಿದ್ದರು.
ಮೃತರು ಪತ್ನಿ, ಪುತ್ರಿ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.