ಬನ್ನೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು.
ನಗರಸಭಾ ಪೂರ್ವದ್ಯಕ್ಷರಾದ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು ಸಾಧ್ಯ. ಮಕ್ಕಳು ಎಳವೆಯಿಂದಲೇ ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಅಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಕೋರಿದರು.

ಪುತ್ತೂರು ಬೊಳುವಾರಿನ ಭಾವನ ಕಲಾ ಆರ್ಟ್ಸ್ ಮಾಲಕರಾದ ಶ್ರೀ ವಿಘ್ನೇಶ್ ವಿಶ್ವಕರ್ಮ ಅವರಿಗೆ ಎವಿಜಿ ಕಲಾಶ್ರೀ ಪ್ರಶಸ್ತಿಯನ್ನು ನೀಡಿ ಈ ಸಂದರ್ಭದಲ್ಲಿ ಗೌರವಿಸಲಾಯಿತು. ಬಳಿಕ ಶಿಕ್ಷಕ ರಕ್ಷಕ ಸಂಘದ ಸದಸ್ಯರು ಇತ್ತೀಚೆಗೆ ಕುಂಟ್ಯಾನ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿರುವ ಸುಮಲತಾ ಅವರನ್ನು ಅಭಿನಂದಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ಉಳಯ ಹಾಗೂ ತಾರಾನಾಥ ಸವಣೂರು ರವರು ಮಾತನಾಡಿ, ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ನಿರ್ದೇಶಕರಾದ ಎ ವಿ ವಾಮನ ಗೌಡ ರವರು ಅತಿಥಿಯಾಗಿ ಪಾಲ್ಗೊಂಡಿದ್ದರು. ಶಿಬಿರದ ನಿರ್ದೇಶಕರು ಹಾಗೂ ಶಾಲೆಯ ಉಪ ಪ್ರಾಂಶುಪಾಲರಾದ ಸವಿತಾ ಸಮಾರೋಪ ಭಾಷಣ ಗೈದರು. ಅಧ್ಯಾಪಕಿ ರಂಜಿತಾ ರೈ 6 ದಿನಗಳ ಶಿಬಿರದ ಸಮಗ್ರ ವರದಿಯನ್ನು ವಾಚಿಸಿದರು. ಸಂಚಾಲಕರಾದ ಎ ವಿ ನಾರಾಯಣರವರು ಸನ್ಮಾನಿತರ ಬಗ್ಗೆ ಅಭಿನಂದನಾ ನುಡಿಗಳನ್ನಾಡಿದರು. ಅಧ್ಯಾಪಿಕೆ ಯಶುಭ ರೈ ಸನ್ಮಾನ ಪತ್ರವನ್ನು ವಾಚಿಸಿದರು. ಶಿಬಿರಾರ್ಥಿ ಜಿತಿನ್ ಎ ಯನ್ ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾಗಿರುವ ವೆಂಕಟರಮಣಗೌಡ ಕಳುವಾಜೆ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಸ್ಮರಿಸುತ್ತಾ ಇನ್ನು ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ನಡೆಸುವರೇ, ಎಲ್ಲರ ಸಹಕಾರವನ್ನು ಕೋರಿದರು. ಆಡಳಿತಾಧಿಕಾರಿಯಾಗಿರುವ ಶ್ರೀ ಗುಡ್ಡಪ್ಪ ಗೌಡ ಬಲ್ಯ ರವರು ಸಹಕರಿಸಿದರು. ವಿದ್ಯಾರ್ಥಿನಿಯರಾದ ಜ್ಞಾನ, ಗೀತಿಷ, ಮತ್ತು ಆರುಷಿ ಪ್ರಾರ್ಥನೆ ಹಾಡಿದರು.
ಶಿಬಿರದ ಬಗ್ಗೆ ವಿದ್ಯಾರ್ಥಿಗಳಾದ ಅದ್ವಿಕ್ ಮತ್ತು ಆರುಷ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಅಧ್ಯಾಪಿಕೆ ಪ್ರಕ್ಷುತಾ ಸ್ವಾಗತಿಸಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಉಮೇಶ್ ಮಳುವೇಲು ವಂದಿಸಿದರು. ಶಿಕ್ಷಕಿಯರಾದ ರೀಮಾ ಲೋಬೋ ಮತ್ತು ಹರ್ಷಿತ ಕಾರ್ಯಕ್ರಮ ನಿರೂಪಿಸಿದರು.