ಬಂಟ್ವಾಳ: ಅಂಗಡಿಯ ಶಟರ್ ಮುರಿದು ಒಳನುಗ್ಗಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ. 11ರಂದು ರಾತ್ರಿ ಕಳ್ಳರು ಅಂಗಡಿಯ ಶಟರ್ ಗೆ ಅಳವಡಿಸಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್ ನಲ್ಲಿದ್ದ ನಗದನ್ನು ಕಳವುಗೈದ ಘಟನೆ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2025 ಕಲಂ: 331(4) 305 ಬಿ.ಎನ್. ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆ ನಡೆಸಲಾಗಿ ಆರೋಪಿ ಮಂಗಳೂರಿನ ಅಡ್ಯಾರು ಕಣ್ಣೂರು ನಿವಾಸಿ ನಝೀರ್ ಮಹಮ್ಮದ್ (26) ಎಂಬಾತನನ್ನು ಶನಿವಾರದಸ್ತಗಿರಿ ಮಾಡಿ, ಆತನಿಂದ ಕಳವುಗೈದ ನಗದಿನ ಪೈಕಿ ರೂ.1,09,490/-ನಗದು ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿ ನಝೀರ್ ಮಹಮ್ಮದ್ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು, ಕಣ್ಣೂರು ಟಿ.ವಿ.ಎಸ್ ಶೋರೂಮ್ ನ ಗಾಜು ಒಡೆದು ಹಣ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಯಾಗಿರುತ್ತಾನೆ. ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ.ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿರುತ್ತಾರೆ.