ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ

ಆಳ ಸಮುದ್ರ ಮೀನುಗಾರಿಕೆಗೆ ನಿರ್ಬಂಧ; ಬೋಟ್‌ಗಳ ತೀವ್ರ ತಪಾಸಣೆ

ಮಂಗಳೂರು : ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂದೂರ್‌ ಕಾರ್ಯಾಚರಣೆ ನಡೆಸಿದ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ ಹಡಗಿನಲ್ಲಿ ತೀವ್ರ ತಪಾಸಣೆ, ಮೀನುಗಾರಿಕಾ ಬೋಟ್‌ಗಳನ್ನು ಸಹ ತಪಾಸಣೆ ನಡೆಸಲಾಗುತ್ತಿದೆ. 12 ನಾಟಿಕಲ್‌ ಮೈಲು ದೂರದಿಂದ ಹೊರ ಹೋಗದಂತೆ ಮತ್ತು ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

















































 
 

ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆ ಕಟ್ಟೆಚ್ಚರ ವಹಿಸಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್‌ಗಳನ್ನ ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶೀಲಿಸುತ್ತಿದ್ದಾರೆ. ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿರುವ ಪೊಲೀಸರು ತಪಾಸಣೆ ಮುಂದುವರಿಸಿದ್ದಾರೆ.

ಉಡುಪಿಯಲ್ಲೂ ಹೈಅಲರ್ಟ್ ಮುಂದುವರಿದಿದೆ. ಕರಾವಳಿ ಕಾವಲು ಪೊಲೀಸರಿಗೆ 22 ಕಿ.ಮೀ ಆಳ ಸಮುದ್ರದಲ್ಲಿ 320 ಕಿಮೀ ಉದ್ದದಲ್ಲಿ ಕಾವಲು ಕಾಯುತ್ತಿದ್ದಾರೆ. ಈ ನಡುವೆ ಪ್ರವಾಸಿ ತಾಣಗಳ ಮೇಲೂ ನಿಗಾ ಇಡುವ ಜವಾಬ್ದಾರಿ ಸಿಎಸ್‌ಪಿ ಮೇಲೆ ಇದೆ. ಮಲ್ಪೆ ಕಡಲತೀರ, ಮರವಂತೆ, ಪಡುಬಿದ್ರೆ, ಕಾಪು ಭಾಗದಲ್ಲಿ ಸಿಎಸ್‌ಪಿ ಪಡೆ ಕಣ್ಗಾವಲು ಇಟ್ಟಿದೆ. ಕರಾವಳಿ ಭಾಗದ ರಕ್ಷಣೆ ಜೊತೆ ಪ್ರವಾಸಿಗರ ರಕ್ಷಣೆಯ ಜವಾಬ್ದಾರಿ ಪೊಲೀಸರ ಮೇಲಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top