ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ

ಯುದ್ಧದ ಹಿನ್ನೆಲೆಯಲ್ಲಿ ತೈಲ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ

ಬೆಂಗಳೂರು: ಬೆಂಗಳೂರಿನ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿಹತ್ತಿಕೊಂಡು ತೈಲ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

















































 
 

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ತೈಲ ಗೋದಾಮು ಇದೆ. ಬೆಂಕಿಯ ಕೆನ್ನಾಲಿಗೆ ಭಾರಿ ಎತ್ತರ ತನಕ ವ್ಯಾಪಿಸಿದೆ. ಗೋದಾಮು ಬಳಿಯಲ್ಲಿರುವ ಕಟ್ಟಡಗಳಿಗೆ ಬೆಂಕಿ ತಗುಲುವ ಆತಂಕ ಎದುರಾಗಿದೆ. ಸರಿಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಬೆಂಕಿಗಾಹುತಿ ಆಗಿದೆ ಎನ್ನಲಾಗಿದೆ. 40 ಸಾವಿರ ಅಡಿಯಲ್ಲಿನ ಗೋದಾಮು ಸಂಪೂರ್ಣವಾಗಿ ಬೆಂಕಿಯಿಂದ ನಾಶವಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆಯಲ್ಲಿ ಈ ಗೋದಾಮಿನಲ್ಲಿ ತೈಲ ಸಂಗ್ರಹಿಸಲಾಗಿದೆ. ಯುದ್ಧದ ಪರಿಣಾಮವಾಗಿ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಆದರೆ ಬೆಂಕಿ ಅವಘಡದಿಂದ ಆಯಿಲ್‌ ನಷ್ಟವಾಗಿದೆ.

ಕಂದಾಯ ಮಾಜಿ ಸಚಿವ ಎಚ್.ಸಿ.ಶ್ರೀಕಂಠಯ್ಯನವರ ಅಳಿಯ ಕೃಷ್ಣಪ್ಪ ಎಂಬವರಿಗೆ ಸೇರಿದ ಗೋದಾಮು ಇದು. ಇದನ್ನು ಶಲ್ ಕಂಪನಿಗೆ ಬಾಡಿಗೆಗೆ ನೀಡಲಾಗಿತ್ತು ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top