ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೇ ರಸ್ತೆಯಲ್ಲಿ ಕಾಮಗಾರಿ ಪ್ರಯುಕ್ತ ಜೂ.1 ರಿಂದ ನವೆಂಬರ್ 1 ರ ವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ಈ ವಿದ್ಯುದೀಕರಣ ಕಾಮಗಾರಿ ನಡೆಯುವ ಈ ಮಾರ್ಗದಲ್ಲಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ ಹಾಗೂ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸಪ್ರೆಸ್ ರದ್ದಾಗಲಿದೆ.
ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ ಎಕ್ಸ್ ಪ್ರೆಸ್ ರೈಲು, ಜೂನ್ 2 ರಿಂದ ಅಕ್ಟೋಬರ್ 31ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟಿ. ವೀ ಎಕ್ಸ್ಪ್ರೆಸ್ರೈಲು, ಜೂನ್ 2 ರಿಂದ ಅಕ್ಟೋಬರ್ 31ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟಿವೀಕ್ಲಿ ಎಂ ರೈಲು, ಜೂನ್ 3 ರಿಂದ ನವೆಂಬರ್ 1ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟಿ-ವೀಕಿ, ಎಕ್ಸ್ ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.