ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ

ಬೆಂಗಳೂರಿನಲ್ಲಿ ಜಿ ಕೆಟಗರಿ ಸೈಟ್‌ ಕೊಡಲು ಸಂಪುಟ ತೀರ್ಮಾನ

ಬೆಂಗಳೂರು: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್‌ಗೆ ಅನುವಾದಿಸಿದ ಬಾನು ಅವರ ಕನ್ನಡ ಕೃತಿ ‘ಎದೆಯ ಹಣತೆ’ 2025ರ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ. ಬಾನು ಮತ್ತು ದೀಪಾ ಇಬ್ಬರನ್ನೂ ಅಭಿನಂದಿಸಲು ಕ್ಯಾಬಿನೆಟ್ ನಿರ್ಣಯ ಅಂಗೀಕರಿಸಿದೆ.

ಬಾನು ಮುಷ್ತಾಕ್ ಅವರು ಬಯಸಿದರೆ, ನಮ್ಮ ನಿಯಮಗಳ ಪ್ರಕಾರ ಬೆಂಗಳೂರಿನಲ್ಲಿ ‘ಜಿ’ ವರ್ಗದ ಸೈಟ್ ಅನ್ನು ಒದಗಿಸುತ್ತೇವೆ. ಅನುವಾದಕರನ್ನು ಸಹ ನಾವು ಅಭಿನಂದಿಸುತ್ತೇವೆ. ಈ ಪ್ರಶಸ್ತಿ ಕನ್ನಡ, ಕರ್ನಾಟಕ ಮತ್ತು ಇಡೀ ದೇಶದ ಘನತೆಯನ್ನು ಹೆಚ್ಚಿಸಿದೆ. ನಮ್ಮ ಕ್ಯಾಬಿನೆಟ್ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರನ್ನು ಅಭಿನಂದಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.



















































 
 

ಬಾನು ಮುಷ್ತಾಕ್ ಅವರ ಬೂಕರ್ ಗೆಲುವಿನ ನಂತರ ಬೆಂಗಳೂರಿನ ಪುಸ್ತಕ ಮಳಿಗೆಗಳಲ್ಲಿ ‘ಹಾರ್ಟ್ ಲ್ಯಾಂಪ್’ಗೆ ಬೇಡಿಕೆ ಹೆಚ್ಚಾಗಿದೆ. ಇಂಗ್ಲಿಷ್‌ ಕೃತಿ ಹಾಗೂ ಕನ್ನಡದ ಮೂಲ ʼಹಸೀನಾ ಮತ್ತು ಇತರ ಕತೆಗಳುʼ ಕೃತಿಗೂ ಬೇಡಿಕೆ ಕಂಡುಬಂದಿದೆ. ಆನ್‌ಲೈನ್‌ನಲ್ಲೂ ಇದು ಹೆಚ್ಚಿನ ಬೇಡಿಕೆಯಿಂದ ಮಾರಾಟವಾಗುತ್ತಿದೆ.

ಈ ನಡುವೆ ʼಹಾರ್ಟ್‌ ಲ್ಯಾಂಪ್‌ʼನ ಪಿಡಿಎಫ್‌ ಕೂಡ ಕೆಲವು ಕಡೆ ಆನ್‌ಲೈನ್‌ನಲ್ಲಿ ಉಚಿತವಾಗಿ ಶೇರ್‌ ಆಗಿದೆ ಎಂದು ತಿಳಿದುಬಂದಿದೆ. ಇದು ಲೇಖಕರ ಹಾಗೂ ಪ್ರಕಾಶಕರ ಕಾಪಿರೈಟ್‌ ಉಲ್ಲಂಘಿಸಿದಂತಾಗಲಿದೆ. ಇದರ ಕಾಪಿಗಳನ್ನು ಉಚಿತವಾಗಿ ಹಂಚುವುದು, ಇಟ್ಟುಕೊಳ್ಳುವುದು ಕಾಯಿದೆಬಾಹಿರ ಎಂದು ತಿಳಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top