ಬೇಕರಿ ಮಾಲೀಕನಿಗೆ ರಿಕ್ಷಾ ಚಾಲಕನಿಂದ ಹಲ್ಲೆಗೆ ಯತ್ನ | ಠಾಣೆಗೆ ದೂರು

ತೊಕ್ಕೊಟ್ಟು:  ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲೀಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಅಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಸಹಕಾರ ನೀಡಿದ್ದಾರೆ ಎನ್ನಲಾಗಿದೆ

 ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನು ತಡೆದಿದ್ದು ಅವರನ್ನು ತಳ್ಳಿ ಮುಂದಾಗಿದ್ದಾರೆ. ಹಲ್ಲೆಗೆ ಈ ವೇಳೆ ಪಕ್ಕದ ಶಿವಸಾಗ‌ರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top