ಉಪ್ಪಿನಂಗಡಿ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಶ್ರೀ ಆದಿ ಧೂಮವತಿ ಶ್ರೀ ದೇವಿ ಬೈದ್ಯೇತಿ  ಕೃಪಾಪೋಷಿತ ಯಕ್ಷಗಾನ ಮಂಡಳಿ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ತಿರುಗಾಟದ ಕೊನೆಯ ಪ್ರದರ್ಶನವು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಪತ್ತನಾಜೆಯಂದು ಜರಗಿತು.

ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ಮೇಳದ ಪ್ರದರ್ಶನವನ್ನು ಗೆಜ್ಜೆಗಿರಿ ಭಕ್ತವೃಂದ ಉಪ್ಪಿನಂಗಡಿ ಆಯೋಜಿಸಿತ್ತು.

ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಾದ ಹರೀಶ ಉಪಾಧ್ಯಾಯರು ಪ್ರಾರ್ಥನೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರು ಮತ್ತು ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು.



















































 
 

ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮೂರು ವರ್ಷಗಳ ಯಶಸ್ವಿ ತಿರುಗಾಟ ನಡೆಸಿದ ಗೆಜ್ಜೆಗಿರಿ ಮೇಳಕ್ಕೆ ಗೆಜ್ಜೆಗಿರಿ ಭಕ್ತ ವೃಂದದ ಪರವಾಗಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನೆ ಸಲ್ಲಿಸಿದರು.

ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೃಷ್ಣರಾವ್ ಅರ್ತಿಲ ಶುಭ ಕೋರಿದರು. ಸಂಘಟಕರ ಪರವಾಗಿ ದಂತ ವೈದ್ಯ ಡಾ. ರಾಜಾರಾಮ್. ಕೆ ಕಾರ್ಯಕ್ರಮದ ಆಯೋಜನೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕರುಣಾಕರ ಸುವರ್ಣ, ವ್ಯವಸ್ಥಾಪನ ಸಮಿತಿ ಸದಸ್ಯ ಸೋಮನಾಥ ಕೆ, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗೀಶ್ ಕುಮಾರ್ ಕಡ್ತಿಲ, ಉಪ್ಪಿನಂಗಡಿ  ಯುವ ವಾಹಿನಿಯ ಅಧ್ಯಕ್ಷ ನಾಣ್ಯಪ್ಪ ಪೂಜಾರಿ ಉಪಸ್ಥಿತರಿದ್ದರು.

ಜಯ ವಿಕ್ರಮ್ ಕಾರ್ಯಕ್ರಮ ನಿರೂಪಿಸಿದರು. ಮೇಳದ ಪರವಾಗಿ ಕಲಾವಿದ ದಿನೇಶ್ ರೈ ಕಡಬ ಧನ್ಯವಾದ ಅರ್ಪಿಸಿದರು. ಬಳಿಕ ಹಿರಣ್ಯಾಕ್ಷ ವಧೆ,ಗಜೇಂದ್ರ ಮೋಕ್ಷ ಮತ್ತು ರಕ್ತರಾತ್ರಿ ಯಕ್ಷಗಾನ ಬಯಲಾಟ ಜರಗಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top