ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಇಂದು (ಗುರುವಾರ) ಸಂಜೆ ಆರೇಲ್ತಡಿಯ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸವಣೂರು ಆರೇಲ್ತಡಿ ಒಕ್ಕೂಟದ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೇಲ್ತಡಿ ಇರ್ವೆರು ಉಳ್ಳಾಕುಲು ಕೆಡೆಂಜೋಡಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶ ಸಮಿತಿಗಳಲ್ಲಿ ಸಕ್ರೀಯವಾಗಿ ದುಡಿದಿದ್ದರು. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು
























