ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗ

36 ಮಂದಿಯ ಗಡಿಪಾರು ಪ್ರಕ್ರಿಯೆ ಶುರು; ಬಿಜೆಪಿಯಿಂದ ಹೋರಾಟದ ಎಚ್ಚರಿಕೆ

ಮಂಗಳೂರು : ಸರಣಿ ಹತ್ಯೆಗಳು ಮತ್ತು ಪ್ರಚೋದನಕಾರಿ ಭಾಷಣಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಹಜ ಸ್ಥಿತಿಗೆ ತರಲು ಪೊಲೀಸರು ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹಿಂದು ಮುಖಂಡ ಅರುಣ್‌ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್‌ ಕೊಟ್ಟ ಬೆನ್ನಲ್ಲೇ ಇದೇ ಮಾದರಿಯಲ್ಲಿ ಇನ್ನೂ 36 ಜನರಿಗೆ ನೋಟಿಸ್‌ ನೀಡಲಾಗಿದೆ.

ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ 36 ಜನರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಇದರಲ್ಲಿ 21 ಹಿಂದುಗಳು ಮತ್ತು 15 ಮುಸ್ಲಿಮರಿದ್ದಾರೆ. ಗಡಿಪಾರು ಪಟ್ಟಿಯಲ್ಲಿ ಬಿಜೆಪಿ ಮುಖಂಡ ಅರುಣ್ ಪುತ್ತಿಲ, ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಹೆಸರಿದೆ. ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ವಿಟ್ಲ, ಸುಳ್ಯ, ಬೆಳ್ಳಾರೆ ಬೆಳ್ತಂಗಡಿ, ಪುಂಜಾಲಕಟ್ಟೆ, ಕಡಬ ಹಾಗೂ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ 36 ಜನ ಗಡೀಪಾರಿನ ಪಟ್ಟಿಯಲ್ಲಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಅರುಣ್ ಪುತ್ತಿಲ ಆಕ್ರೋಶ ಹೊರಹಾಕಿದ್ದು, ನಾನು ಯಾವುದೇ ಕಾರಣಕ್ಕೂ ಗಡೀಪಾರು ಆದೇಶ ಸ್ವೀಕರಿಸಲ್ಲ ಎಂದಿದ್ದಾರೆ.

















































 
 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗುತ್ತಿರುವ ಬೆಳವಣಿಗೆ ಹಿಂದು ನಾಯಕರನ್ನು ಕೆರಳಿಸಿದೆ. ದಕ್ಷಿಣ ಕನ್ನಡದಲ್ಲಿ ಕೆರಳಿಸುವ ಪ್ರಕ್ರಿಯೆಯನ್ನು ಸರ್ಕಾರವೇ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ. ದಕ್ಷಿಣ ಕನ್ನಡವನ್ನು ದಕ್ಷಿಣ ಕಾಶ್ಮೀರ ಮಾಡಿಕೊಳ್ಳಲು ಹೊರಟಿದ್ದಾರೆ. ಹೀಗಾಗಿ ಹಿಂದುಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಸೇರಿದಂತೆ ಕರಾವಳಿಯ ಬಿಜೆಪಿ ಶಾಸಕರು ಮತ್ತು ನಾಯರು ಪೊಲೀಸರ ಕ್ರಮವನ್ನು ವಿರೋಧಿಸಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಪೊಲೀಸರ ಹಿಂದು ದಮನ ನೀತಿಯ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top