ಸಿದ್ಧಾಪುರ: ಇಂದು ಬೆಳಗಿನ ಜಾವ ಒಂಟಿ ಸಲಗವೊಂದು ಬಾಳೆಬರೆ ಘಾಟ್ ಹೊಸಂಗಡಿ ಸಿದ್ದಾಪುರ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.
ಸಲಗ ಸಂಚಾರ ಕಂಡು ಬರುತ್ತಿದ್ದಂತೆ ಸಾರ್ವಜನಿಕರು ಭಯಭೀತರಾಗಿದ್ದಾರೆ.
ಸಾರ್ವಜನಿಕರ, ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು ಸಿದ್ದಾಪುರ ಭಾಗದ ಶಾಲಾ ಕಾಲೇಜು ಅಂಗನವಾಡಿಗಳಿಗೆ ರಜೆ ಘೋಷಣೆ ಜತೆಗೆ ಸಿದ್ಧಾಪುರ ವಾರದ ಸಂತೆಯನ್ನು ರದ್ದುಗೊಳಿಸಲಾಗಿದೆ.