ಪುತ್ತೂರು : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ್ಯಾಂಕ್ (EWS) ಪಡೆದಿದ್ದಾರೆ.
ಅಲ್ಲದೆ 11835 ನೇ ರ್ಯಾಂಕ್ (CRL) ಪಡೆದುಕೊಂಡಿದ್ದಾರೆ.
ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.