ಹಾವು ಕಡಿದು ಯುವಕ ಮೃತ್ಯು

ಬಂಟ್ವಾಳ: ಹಾವು ಕಡಿದು ಯುವಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸ ಮಾಡುತ್ತಿದ್ದ ಇವರು  ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧ್ಯಾಹ್ನದ ಸಮಯ ಅಡಿಕೆ ಸುಲಿಯುತ್ತಿದ್ದ ಸಂದರ್ಭ ಕಾಲಿನ ಬೆರಳಿಗೆ ಹಾವು ಕಚ್ಚಿತ್ತು ಎನ್ನಲಾಗಿದೆ. ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಇವರಿಗೆ 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top