ದಕ್ಷಿಣ ಕನ್ನಡದಲ್ಲಿ ಯಾರನ್ನೂ ಗುರಿ ಮಾಡಿಕೊಂಡಿಲ್ಲ : ಪರಮೇಶ್ವರ್‌ ಸ್ಪಷ್ಟನೆ

ವಾರದೊಳಗೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆ ಕಾರ್ಯಾರಂಭ

ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ. ನಾವು ಯಾರನ್ನೂ ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಈಗಾಗಲೇ ತೀರ್ಮಾನ ಮಾಡಿದಂತೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ಸರಕಾರಕ್ಕೆ ಇದೆ. ಅದಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾನಾಗಲಿ ಅಥವಾ ಮುಖ್ಯಮಂತ್ರಿಯವರಾಗಲಿ ಪೊಲೀಸ್ ಅಧಿಕಾರಿಗಳಿಗೆ ದಿನನಿತ್ಯ ಗಂಟೆಗೊಮ್ಮೆ ಸೂಚನೆಗಳನ್ನು ಕೊಡುವುದಿಲ್ಲ. ಏನಾದರು ಘಟನೆಗಳು ನಡೆದಾಗ ಅಧಿಕಾರಿಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದರು.

















































 
 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಯಾರೂ ಕಾನೂನು ಮತ್ತು ಜನ ಸಮುದಾಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಅವರಿಗೆ ಆತಂಕವಿರಬಹುದು. ಅದನ್ನು ಬಿಟ್ಟರೆ ಸಾಮಾನ್ಯ ಜನರಿಗೆ ತೊಂದರೆಯಾಗುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರಾವಳಿ ಭಾಗದಲ್ಲಿ ಇನ್ನೂ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿರಬಹುದು. ಕರ್ತವ್ಯ ಹಿನ್ನೆಲೆಯಲ್ಲಿ ಪೊಲೀಸರು ರಾತ್ರಿ ಗಸ್ತು ತಿರುಗುತ್ತಾರೆ. ಪ್ರಸ್ತುತ ಪರಿಸ್ಥಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುವುದು ಹೆಚ್ಚಾಗಿದೆ. ಈ ವೇಳೆ ಮನೆಮನೆಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಗಲಭೆ ಹಬ್ಬಿಸುವವರು ಇದ್ದರೆ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top