ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬ ಮಗುವು ಒಂದೊಂದು ಗಿಡವನ್ನು ನೆಟ್ಟು ಏಕ್ ಫೇಡ್ ಮಾ ಕೆ ನಾಮ್ ಎಂಬ ಅಭಿಯಾನದಲ್ಲಿ ಪಾಲ್ಗೊಂಡರು. ಇಕೋ ಕ್ಲಬ್ ವೆಬ್ ಸೈಟ್ ನಲ್ಲಿ ಗಿಡ ನೆಡುವ ಪೋಟೋ ಅಪ್ಲೋಡ್ ಮಾಡಿ ಪ್ರಮಾಣಪತ್ರ ಪಡೆದುಕೊಂಡರು.

ಭಾರತದ ಗೌರವಾನ್ವಿತ ಪ್ರಧಾನಮಂತ್ರಿಗಳು ತಾಯಿಯ ಹೆಸರಿನಲ್ಲಿ ಸಿಂದೂರ ಗಿಡ ನೆಟ್ಟು ಪ್ರತಿ ಶಾಲೆಗಳಲ್ಲೂ ಮಕ್ಕಳು ತಾಯಿಯ ಹೆಸರಿನಲ್ಲಿ ಗಿಡ ನೆಡುವ ಅಭಿಯಾನ ಆರಂಭಿಸಲು ಕರೆ ನೀಡಿದ ಪ್ರಕಾರ ಶಾಲೆಗಳಲ್ಲಿ ಕಾರ್ಯಕ್ರಮ ನಡೆಸಲು ಕೇಂದ್ರ ಶಿಕ್ಷಣ ಸಚಿವರು ನಡೆಸಿದ ವಿಡಿಯೋ ಕಾನ್ಪರೆನ್ಸ್ ನ್ನು ವಿದ್ಯಾರ್ಥಿಗಳು ಆಲಿಸಿದರು. ಶಾಲಾ ಮುಖ್ಯಶಿಕ್ಷಕ ತಾರಾನಾಥ ಪಿ. ಕಾರ್ಯಕ್ರಮ ಸಂಘಟಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದ, ಇಕೋ ಕ್ಲಬ್ ನ ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮ ನಡೆಸಿದರು. ಇಕೋ ಕ್ಲಬ್ ನಾಯಕ ಉದಿತ್ ವಂದಿಸಿದರು.
