ಸುಹಾಸ್‌ ಶೆಟ್ಟಿ ಹತ್ಯೆಯ ಎನ್‌ಐಎ ತನಿಖೆ : ಹಿಂದೂ ನಾಯಕರ ಸ್ವಾಗತ

ರಾಜ್ಯ ಸರ್ಕಾರದ ತನಿಖೆಯಲ್ಲಿ ನ್ಯಾಯ ಸಿಗುವ ವಿಶ್ವಾಸ ಇರಲಿಲ್ಲ ಎಂದ ಕ್ಯಾ.ಬ್ರಿಜೇಶ್‌ ಚೌಟ

ಮಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಉಂಟು ಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿರುವುದನ್ನು ಬಿಜೆಪಿ ಸಂಸದರು, ಶಾಸಕರು ಮತ್ತು ಮುಖಂಡರು ಸ್ವಾಗತಿಸಿ ಇದರಿಂದ ನೈಜ ಆರೋಪಿಗಳು ಸೆರೆಯಾಗಿ ನ್ಯಾಯ ಸಿಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಮೇ 2ರಂದು ದಕ್ಷಿಣ ಕನ್ನಡ ಕ್ಯಾ. ಬ್ರಿಜೇಶ್‌ ಚೌಟ, ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದೆ ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡದ ಬಗ್ಗೆ ಬಲವಾದ ಶಂಕೆಯಿರುವ ಕಾರಣ ಅದನ್ನು ತುರ್ತಾಗಿ ಎನ್‌ಐಎ ಸಂಸ್ಥೆಗೆ ವಹಿಸುವಂತೆ ಕೋರಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಈ ಪತ್ರ ಬರೆದು ಒಂದು ತಿಂಗಳಾಗುತ್ತಿದ್ದಂತೆ ಸುಹಾಸ್ ಶೆಟ್ಟಿ ಹತ್ಯೆಯ ಗಂಭೀರತೆ ಹಾಗೂ ಅದರ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆ ಕೈವಾಡವಿರುವ ಅನುಮಾನದ ಮೇಲೆ ಇಡೀ ಪ್ರಕರಣವನ್ನು ಈಗ ಕೇಂದ್ರ ತನಿಖಾ ಸಂಸ್ಥೆಯಾದ ಎನ್‌ಐಎಗೆ ವಹಿಸಿರುವುದಕ್ಕೆ ಕ್ಯಾ. ಚೌಟ ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಗೃಹ ಸಚಿವಾಲಯಕ್ಕೆ ಧನ್ಯವಾದವನ್ನು ಸಲ್ಲಿಸಿದ್ದಾರೆ.

















































 
 

ಸುಹಾಸ್ ಶೆಟ್ಟಿ ಹತ್ಯೆಯಾದ ಬೆನ್ನಲ್ಲೇ ಈ ಪ್ರಕರಣವನ್ನು ಎನ್‌ಐಎ ತನಿಖಾ ಸಂಸ್ಥೆಗೆ ವಹಿಸಬೇಕೆಂದು ನಾನು ಒತ್ತಾಯಿಸಿದ್ದೆ. ಆ ಕೂಡಲೇ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆದು, ಸುಹಾಸ್ ಹತ್ಯೆಯಲ್ಲಿ ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನು ತ್ವರಿತವಾಗಿ ನ್ಯಾಯದ ಮುಂದೆ ತರಬೇಕಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ಹೀಗಿರುವಾಗ, ಸುಹಾಸ್ ಹತ್ಯೆ ಹಿಂದೆ ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡವನ್ನು ಬಯಲಿಗೆಳೆಯಬೇಕಾದರೆ ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸುವಂತೆ ಗೃಹ ಸಚಿವರಿಗೆ ಬರೆದಿದ್ದ ಪತ್ರದಲ್ಲಿ ಆಗ್ರಹಿಸಿದ್ದೆ ಎಂದು ಕ್ಯಾ.ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಇದೀಗ ಸುಹಾಸ್ ಶೆಟ್ಟಿ ಹತ್ಯೆಯನ್ನು ಎನ್‌ಐಎಗೆ ವಹಿಸಿರುವ ಕಾರಣ ದಕ್ಷಿಣ ಕನ್ನಡದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಮೂಲಭೂತವಾದಿ, ರಾಷ್ಟ್ರ ವಿರೋಧಿ ಮತ್ತು ಜಿಹಾದಿ ಮಾನಸಿಕತೆಯ ಶಕ್ತಿಗಳು ಪಿಎಫ್‌ಐನಂಥ ನಿಷೇಧಿತ ಸಂಘಟನೆಗಳ ಜತೆ ಸ್ಲೀಪರ್ ಸೆಲ್‌ನಂತೆ ಹೇಗೆ ಕೆಲಸ ಮಾಡುತ್ತಿವೆ ಎನ್ನುವುದು ಬೆಳಕಿಗೆ ಬರಲಿದೆ. ಆ ಮೂಲಕ ಗೃಹ ಸಚಿವಾಲಯವು ಸಕಾಲದಲ್ಲಿ ಸುಹಾಸ್ ಶೆಟ್ಟಿ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿರುವುದು ದಕ್ಷಿಣ ಕನ್ನಡದಲ್ಲಿ ದೇಶವಿರೋಧಿ ಶಕ್ತಿಗಳನ್ನು ಬೇರು ಸಮೇತ ಕಿತ್ತೊಗೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೊದಲ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಕೇಸನ್ನು ಎನ್‌ಐಎಗೆ ವಹಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿತ್ತು. ಆದರೆ, ಕೇವಲ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಂದುವರಿದ ಭಾಗವಾಗಿರುವ ಎಸ್‌ಡಿಪಿಐ ಜತೆಗೆ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿರುವಾಗ ಸುಹಾಸ್ ಶೆಟ್ಟಿ ಹತ್ಯೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸುಹಾಸ್ ಕುಟುಂಬಕ್ಕೆ ನ್ಯಾಯ ದೊರಕಿಸುತ್ತದೆ ಎನ್ನುವ ವಿಶ್ವಾಸ ಖಂಡಿತ ಇರಲಿಲ್ಲ ಎಂದಿದ್ದಾರೆ.

ಶಾಸಕ ಸುನಿಲ್‌ ಕುಮಾರ್‌ ಸ್ವಾಗತ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ತನಿಖೆಗೆ ವಹಿಸಿರುವುದನ್ನು ಸ್ವಾಗತಿಸಿರುವ ಶಾಸಕ ವಿ.ಸುನೀಲ್ ಕುಮಾರ್ ಹತ್ಯೆಯ ಸಂಪೂರ್ಣ ವಿವರಗಳು ಎನ್‌ಐಎ ತನಿಖೆಯಿಂದ ಬಯಲಾಗಲಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದ ದಿನದಿಂದಲೇ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯ ಮಾಡುತ್ತಲೇ ಇದ್ದೆವು. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರದ ತನಿಖಾ ವಿಧಾನವೂ ಏಕಪಕ್ಷೀಯವಾಗಿತ್ತು. ಹಿಂದೂ ಕಾರ್ಯಕರ್ತರನ್ನು ವಿನಾಕಾರಣ ಗುರಿಯಾಗಿಸಿ ಎಫ್‌ಐಆರ್ ದಾಖಲಿಸುವುದು, ದ್ವೇಷದ ಗಡಿಪಾರು ಶಿಕ್ಷೆ ಇತ್ಯಾದಿ ಕ್ರಮಗಳನ್ನು ಸರ್ಕಾರ ಕೈಗೊಂಡಿತ್ತು. ಮಂಗಳೂರಿಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು ಏಕಪಕ್ಷೀಯವಾಗಿ ಹಿಂದೂ ಸಂಘಟನೆಯ ಮೇಲೆ ಆರೋಪ ಹೊರಿಸಿದ್ದರು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top