ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್‍ | ಪೊಲೀಸ್‍ ದೌರ್ಜನ್ಯದ ಕುರಿತು ಬಿಜೆಪಿಯಿಂದ ಮಾಹಿತಿ ಸಂಗ್ರಹ ಸಭೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿರುವುದು ಮತ್ತು ಗಡಿಪಾರು ನೋಟಿಸ್ ನೀಡಿರುವುದು ಹಾಗೂ ಪೊಲೀಸ್ ದೌರ್ಜನ್ಯದ ಕುರಿತು ಮಾಹಿತಿ ಸಂಗ್ರಹ ಸಭೆ ಇಂದು ನಡೆಯಿತು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿ ಪಕ್ಷ ನಾಯಕರಾದ ಆರ್‍.ಅಶೋಕ್‍, ಚಲವಾದಿ ನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ  ಸಹಿ ಸಂಗ್ರಹ ಸಭೆ ನಡೆಯಿತು.

ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್‍ ಕುಂಪಲ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಾಸಕರಾದ ಅರವಿಂದ ಬೆಲ್ಲದ, ಎನ್‍.ರವಿ ಕುಮಾರ್‍, ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್‍ ಬ್ರಿಜೇಶ್‍ ಚೌಟ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್‍, ಡಾ.ಭರತ್‍ ಶೆಟ್ಟಿ ವೈ,., ಡಾ.ಭರತ್ ಶೆಟ್ಟಿ ವೈ., ಉಮಾನಾಥ ಕೋಟ್ಯಾನ್‍. ಭಾಗೀರಥಿ ಮುರುಳ್ಯ, ರಾಜೇಶ್‍ ನಾಯ್ಕ್‍, ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್, ರಾಜ್ಯ ಮುಖಂಡ ಭಾಸ್ಕರ ರಾವ್‍, ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top