ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಾಲಾ ವಿಜ್ಞಾನ’ವೃತಿಕಾ’ಸಂಘದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

2025-26 ನೇ ಸಾಲಿನ ವಿಶ್ವ ಪರಿಸರ ದಿನದಧ್ಯೇಯ ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರಕ್ಕೆ ಸಂಬಂಧಿಸಿ ಮಕ್ಕಳ ಮೂಲಕ ಪೋಷಕರಿಗೆ ಪ್ಲಾಸ್ಟಿಕ್ ಬದಲಿ-ಏನು? ಯಾಕೆ?- ಹೇಗೆ? ಎಂಬ ಆಶಯದ ಪತ್ರಕವನ್ನು ನೀಡಲಾಯಿತು. ಮಕ್ಕಳು ತಮ್ಮ ಮನೆಯಲ್ಲಿರುವ ಹಳೆಯ ಬಟ್ಟೆಗಳನ್ನು ಬಳಸಿ ಪರಿಸರ ಸ್ನೇಹಿ ಕೈಚೀಲ ತಯಾರಿಸಿದರು. ಪರಿಸರ ಸಂರಕ್ಷಣಾ ಘೋಷ ವಾಕ್ಯಗಳೊಂದಿಗೆ ಮಕ್ಕಳು ಹಾಗೂ ಶಿಕ್ಷಕರು ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು. ಪ್ರೌಢ ವಿಭಾಗದ ಮಕ್ಕಳು ಪ್ಲಾಸ್ಟಿಕ್ ಮಾಲಿನ್ಯ ಮತ್ತು ಮುಕ್ತ ಪರಿಸರದ ಮಹತ್ವದ ಬಗ್ಗೆ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪ್ರಾತ್ಯಕ್ಷಿಕಾ ಮಾಹಿತಿ ತಿಳಿಸಲಾಯಿತು.

ಪ್ಲಾಸ್ಟಿಕ್‌ನ ಮಿತ ಬಳಕೆ- ಮರುಬಳಕೆಯ ವಿವಿಧ ಯೋಜನೆಗಳೊಂದಿಗೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top