ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡದಲ್ಲಿ ಬೆಂಕಿ ಅವಘಡ

ಮಂಗಳೂರು ವಿವಿಯ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌

ಮಂಗಳೂರು: ದೇರಳಕಟ್ಟೆಯಲ್ಲಿ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲಿಯುವ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಕಟ್ಟಡದ ಟಾಪ್ ಫ್ಲೋರ್‌ನಲ್ಲಿ ಸಭಾಂಗಣವಿದ್ದು, ಅಲ್ಲಿ ಯಾವುದೇ ಕಾರ್ಯಕ್ರಮಗಳಿರಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಜನರೇಟರ್ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿರುವುದಾಗಿ ತಿಳಿದುಬಂದಿದೆ.



















































 
 

ಹಾಸ್ಟೆಲ್‌ನಲ್ಲಿ 147 ವಿದ್ಯಾರ್ಥಿಗಳಿದ್ದರು. ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಹಾಸ್ಟೆಲ್‌ ಕಟ್ಟಡದ ಎದರೇ ಪೆಟ್ರೋಲ್‌ ಪಂಪ್‌ ಇದ್ದು, ಇಲ್ಲಿಂದ ಅಗ್ನಿಶಮನ ಉಪಕರಣಗಳನ್ನು ತಂದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿಶಾಮಕ ಪಡೆಯವರು ಆಗಮಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top