ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ನೇರೋಳ್ತಡ್ಕ ದಲ್ಲಿ ಮನೆಯೊಂದರ ಮೇಲೆ ಬೃಹದಾಕಾರದ ಮರವೊಂದು ಉರುಳಿಬಿದ್ದ ಪರಿಣಾಮ ಮನೆಗೆ ತೀವ್ರ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ,
ನೇರೋಳ್ತಡ್ಕ ಜಯಂತಿ ಎಂಬುವವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಘಟನೆ ನಡೆದಾಗ ಜಯಂತಿ ಹಾಗೂ ಅವರ ಮಕ್ಕಳಾದ ಧನರಾಜ್ ಮತ್ತು ಚೇತನ್ ರಾಜ್ ಮನೆಯೊಳಗೇ ಇದ್ದರು. ಮರ ಬಿದ್ದ ರಭಸಕ್ಕೆ ಮನೆಯ ಸಿಮೆಂಟ್ ಶೀಟ್ಗಳು ಸಂಪೂರ್ಣವಾಗಿ ಪುಡಿಪುಡಿಯಾಗಿದ್ದು ಸುಮಾರು 2 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಮರ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ, ಸದಸ್ಯ ಹರೀಶ್ ರೈ ಜಾರತಾರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ.