ಪುತ್ತೂರು ಕೋ ಆಪರೇಟಿವ್‍ ಟೌನ್‍ ಬ್ಯಾಂಕ್‍ ನಿಂದ ಶಶಿಕುಮಾರ್ ರೈ ಬಾಲ್ಯೊಟ್ಟುರಿಗೆ ಸನ್ಮಾನ

ಪುತ್ತೂರು: ದ ಕ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕರು ಮತ್ತು ದ ಕ ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರನ್ನು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್‍ ಆಡಳಿತ ಮಂಡಳಿ ಹಾಗೂ ಸಿಬ್ಬಂಧಿಗಳ ವತಿಯಿಂದ ಸನ್ಮಾನಿಸಲಾಯಿತು. 

ಬ್ಯಾಂಕಿನ ಅಧ್ಯಕ್ಷ  ಎನ್.  ಕಿಶೋರ  ಕೊಳತ್ತಾಯ ಅಧ್ಯಕ್ಷತೆ ವಹಿಸಿ, ಬ್ಯಾಂಕಿನ ಸರ್ವಾಂಗಿಣ ಪ್ರಗತಿಯ ವಿವರ ನೀಡಿ ಸನ್ಮಾನದ ಮಾತುಗಳನ್ನಾಡಿದರು.

ಸಹಕಾರಿ ಸಂಘಗಳ  ಉಪ ನಿಬಂಧಕ ರಮೇಶ ಎಚ್. ಎನ್. ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರದ ಬಗ್ಗೆ ವಿವರಿಸಿ, ಟೌನ್ ಬ್ಯಾಂಕಿನ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.





















































 
 

ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಪುತ್ತೂರು ಟೌನ್ ಬ್ಯಾಂಕ್ ಜನಮನದಲ್ಲಿ ಮನೆಮಾತಾದ ಬಗ್ಗೆ ವಿವರವಾಗಿ ತಿಳಿಸಿ ಇತ್ತಿಚೆಗಿನ  ಪ್ರಗತಿಯನ್ನು ಶ್ಲಾಘಿಸಿದರು.

ಬ್ಯಾಂಕಿನ ಹಿರಿಯ ನಿರ್ದೇಶಕ ಚಂದ್ರ ಶೇಖರ ರಾವ್ ಬಪ್ಪಳಿಗೆ ಸನ್ಮಾನಿತರ ವಿವರ ನೀಡಿದರು. ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ. ಶೇಖರ ಶೆಟ್ಟಿ ಸ್ವಾಗತಿಸಿ, ಕಾರ್ಯ ಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಶ್ರೀಧರ ಗೌಡ ವಂದಿಸಿದರು. ಪುತ್ತೂರಿನ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಎಸ್. ಎಮ್ ರಘು , ಮಂಗಳೂರಿನ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಪುತ್ತೂರು ಸಹಕಾರಿ ಸಂಘಗಳ  CDO ಶೋಭಾ, ಬೆಳ್ತಂಗಡಿ CDO ಪ್ರತಿಮಾ, ಒಡಿಯೂರು ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸುರೇಶ ರೈ, ಬ್ಯಾಂಕಿನ ನಿರ್ದೇಶಕರಾದ ಕಿರಣ್ ಕುಮಾರ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಸುಜೀಂದ್ರ ಪ್ರಭು, ಶ್ರೀಧರ ಪಟ್ಲ, ಸಿಎ ಅರವಿಂದ ಕೃಷ್ಣ, ಮಲ್ಲೇಶ ಕುಮಾರ್, ಗಣೇಶ ಕೌಕ್ರಾಡಿ, ಸೀಮಾ ನಾಗರಾಜ್, ವೀಣಾ ಮತ್ತು ಪುತ್ತೂರು ಶಾಖಾಧಿಕಾರಿ ಚಿದಂಬರ ಉಪಸ್ಥಿತರಿದ್ದರು. 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top