ನವದೆಹಲಿ: ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಜನರಿಗೆ ಅರಿವಾಗಿಸಲು ಪ್ರಧಾನಿ ಮೋದಿ ಸರ್ಕಾರ ‘ಸಂವಿಧಾನ ಹತ್ಯಾ ದಿನ’ವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇಂದಿಗೆ ದೇಶದಲ್ಲಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿ 50 ವರ್ಷ ಕಳೆದಿದೆ. ಆಳುವವರು ಸರಿವಾಧಿಕಾರಿಗಳಾದರೆ ಅವರನ್ನು ಅಧಿಕಾರದಿಂದ ಉರುಳಿಸುವ ಶಕ್ತಿಯನ್ನು ಜನರು ಹೊಂದಿದ್ದಾರೆ. ಅದನ್ನು ಈ ದಿನ ನೆನಪು ಮಾಡಿಸುತ್ತದೆ ಎಂದು ತಿಳಿಸಿದ್ದಾರೆ.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ನ್ಯಾಯಾಂಗದ ಕೈಗಳನ್ನು ಬಂಧಿಸಲಾಯಿತು. ಈ ಸಂದರ್ಭದಲ್ಲಿ ಜನರು ಇಂದಿರಾ ಗಾಂಧಿ ಅವರು ಅಧಿಕಾರ ತ್ಯಜಿಸಬೇಕು ಎಂದು ಧ್ವನಿ ಎತ್ತಿದರು. ಸರ್ವಾಧಿಕಾರಿ ಕಾಂಗ್ರೆಸ್ ಅನ್ನು ಬುಡಸಮೇತ ಕಿತ್ತು ಹಾಕಿದರು. ಈ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ವೀರರಿಗೆ ತಾನು ನಮನ ಸಲ್ಲಿಸುವುದಾಗಿ ಹೇಳಿದ್ದಾರೆ
























