ಬೆಂಗಳೂರು: ನಾನು ಮತ್ತು ಬಿ.ಆರ್. ಪಾಟೀಲ್ ಅವರು ಒಟ್ಟಿಗೆ ಶಾಸಕರಾದವರು. ನನಗೆ ಮುಖ್ಯಮಂತ್ರಿಯಾಗಲು ಅವಕಾಶ ಸಿಕ್ಕಿದ್ದರಿಂದ ಪಾಟೀಲ್ ಅವರು ಈ ರೀತಿಯ ಹೇಳಿಕೆ ನೀಡಿರಬಹುದು. ಅವರ ಹೇಳಿಕೆಗಳ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಅದೃಷ್ಟದಿಂದ ಮುಖ್ಯಮಂತ್ರಿಯಾದವರು ಎಂಬ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಇದೇ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಆಡಳಿತ ನ್ಯಾಯ ಮಂಡಳಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾದ ಆದೇಶವನ್ನು ರದ್ದು ಮಾಡಿರುವುದಕ್ಕೆ ಸಂಬಂಧಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
























