ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು

ಸುಟ್ಟು ಭಸ್ಮವಾದ ಕಾರು, ಚಾಲಕ ಅಪಾಯದಿಂದ ಪಾರು

ಮಂಗಳೂರು: ನಾಯಿಯೊಂದು ಅಡ್ಡ ಬಂದ ಪರಿಣಾಮ ಕಾರೊಂದು ‌ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ಗಂಜಿಮಠದಲ್ಲಿ ನಡೆದಿದೆ.

ಕಾರು ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ‌. ಈ ಸಂದರ್ಭದಲ್ಲಿ ಕಾರಿನ ಎಸಿ ಸ್ಪೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕಾರು ಸುಟ್ಟು ಭಸ್ಮವಾಗಿದೆ.





















































 
 

ಕಾರು ಚಾಲಕ ಅಪಾಯದಿಂದ ಪಾರಾಗಿದೆ. ಬೆಂಕಿಗೆ ಆಹುತಿಯಾದ ಟೂರಿಸ್ಟ್ ಕಾರು ಕೊಳಂಬೆ ಮೂಲದ ವ್ಯಕ್ತಿಯೊಬ್ಬರಿಗೆ ‌ಸೇರಿದ್ದಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top