ಬಸ್ ನಿಲ್ದಾಣದಲ್ಲಿ ಸಹಪಾಠಿಯ ಜೊತೆ ಮಾತನಾಡುತ್ತಿದ್ದ ಬಾಲಕನಿಗೆ ಬೆದರಿಕೆ
ವಿಟ್ಲ : ಖಾಸಗಿ ಬಸ್ ನಿಲ್ದಾಣದ ಸಮೀಪ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ಬಾಲಕನಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ಸಹಪಾಠಿಯ ಜೊತೆಗೆ ಮಾತನಾಡುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
ಮಂಜೇಶ್ವರ ಎಣ್ಮಕಜೆ ನಿವಾಸಿ ಪದ್ಮರಾಜ್ ಬಂಧಿಸಲ್ಪಟ್ಟಿರುವ ಯುವಕ. ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದು, ಈ ಸಂದರ್ಭ ಪದ್ಮರಾಜ್ ಅಲ್ಲಿಗೆ ಬಂದು ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
























