ನವದೆಹಲಿ: ಉಪರಾಷ್ಟ್ರಪತಿ ಹುದ್ದೆ ಅಲಂಕಿರಿಸ್ದದ ಜಗದೀಪ್ ಧನ್ಕರ್ ಅವರು ತಮ್ಮ ಸ್ಥಾನಕ್ಕೆ ಅನಾರೋಗ್ಯದ ನೆಪವೊಡ್ಡಿ ರಾಜೀನಾಮೆ ನೀಡಿದ್ದು, ಈ ಸಂಬಂಧ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ತಮ್ಮ ಸಾಮರ್ಥ್ಯಕ್ಕೆ ಸರಿಯಾಗಿ ಧನ್ಕರ್ ಅವರಿದೆ ದೇಶಕ್ಕಾಗಿ ಸೇವೆ ಸಲ್ಲಿಸಲು ಹಲವಾರು ಅವಕಾಶಗಳು ಲಭಿಸಿವೆ. ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.
ಧನ್ಕರ್ ಅವರು ಅನಾರೋಗ್ಯವನ್ನು ಕಾರಣವನ್ನಾಗಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಪತ್ರ ಬರೆದಿದ್ದರು. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
























