ಬೆಳಗಾವಿ: ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ 2023 ರ ಅಕ್ಟೋಬರ್ ತಿಂಗಳಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿ ತುಫೆಲಹ್ಮದ್ ದಾದಾಪೀರ್ ನಾಗರ್ಚಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಹಿಂದೂ ಕಾರ್ಯಕರ್ತ ಪುನೀತ್ ಕೆರೇಹಳ್ಳಿ ಅವರು ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೋಸ್ಟ್ ಮಾಡಿದ ಕಾರಣಕ್ಕೆ ಬೆಳಕಿಗೆ ಬಂದಿದೆ.
ಟ್ವಿಟರ್ ಮೂಲಕ ಈ ಮಾಹಿತಿ ತಿಳಿದ ತಕ್ಷಣವೇ ಬೆಳಗಾವಿ ಪೊಲೀಸರು ಆರೋಪಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
























