ನವದೆಹಲಿ: ಪ್ರಧಾನಿ ಮೋದಿ ಅವರ ಸ್ವಾತಂತ್ರ್ಯ ದಿನದ ಭಾಷಣವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಅತ್ಯುತ್ತಮ ಮತ್ತು ಸ್ಪೂರ್ತಿದಾಯಕ ಎಂದು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಭಾಷಣ ರಾಷ್ಟ್ರೀಯ ಪ್ರಗತಿ, ಭದ್ರತಾ ಯೋಜನೆಗಳು ಮತ್ತು ವೀಕ್ಷಿತ್ ಭಾರತ್ ಸಾಧಿಸಲು ಮಾರ್ಗಗಳನ್ನು ಎತ್ತಿ ತೋರಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಿಂದ ಮಾಡಿದ ಭಾಷಣ ಅತ್ಯುತ್ತಮ ಮತ್ತು ಸ್ಪೂರ್ತಿದಾಯಕ. ಈ ಭಾಷಣದಲ್ಲಿ ಹಲವಾರು ವಿಷಯಗಳ ಬಗ್ಗೆ ಅವರು ಗಮನ ಸೆಳೆದಿದ್ದಾರೆ. ಮೋದೀಜಿ ಅವರ ಅದ್ಭುತ ಭಾಷಣಕ್ಕಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.
























