ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಧೈರ್ಯಶಾಲಿಗಳಿಗೆ ಗೌರವ ಸಲ್ಲಿಸಿ, ಭಾರತದ ಸಶಸ್ತ್ರ ಸಂಘರ್ಷಗಳಲ್ಲಿ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವಾರ್ಪಣೆ ಮಾಡಿದರು.
ಈಸಂದರ್ಭದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ರಾಷ್ಚ್ರಪತಿಗಳ ಜೊತೆಗಿದ್ದರು. ವಾಯುಪಡೆಯ ಇಬ್ಬರು ಮಹಿಳಾ ಅಧಿಕಾರಿಗಳು ಮಾಲಾರ್ಪಣೆ ಮಾಡಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಜಯ್ ಸೇರ್ ಸಹ ಸ್ಮಾರಕದಲ್ಲಿ ಉಪಸ್ಥಿತರಿದ್ದರು.
79 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ಅಧ್ಯಕ್ಷ ಮುರ್ಮು ಅವರು ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಗೆ 127 ಶೌರ್ಯ ಪ್ರಶಸ್ತಿಗಳು ಮತ್ತು 40 ವಿಶಿಷ್ಟ ಸೇವಾ ಪ್ರಶಸ್ತಿಗಳನ್ನು ಅನುಮೋದಿಸಿದರು.
























