ಸುಳ್ಯ: ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ಎನ್. ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ.ಜಿ ಪಾಲಿಟೆಕ್ನಿಕ್ ಸುಳ್ಯ) ವತಿಯಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ ಸಭೆಯನ್ನು ಅರಂಬೂರಿನ “ವಿಕಸನ”ಮನೆಯಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ, ಕೆ ವಿ ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರ, ಕೆ. ವಿ. ಜಿ. ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಸಿ. ಬಿಳಿನೆಲೆ, ವ್ಯಕ್ತಿತ್ವ ವಿಕಸನ ತರಬೇತುದಾರೆ, ಎನ್ನೆಂಸಿಯ ಸಹಾಯಕ ಪ್ರಾಧ್ಯಾಪಕಿ ಡಾ| ಅನುರಾಧಾ ಕುರುಂಜಿ ಅವರುಗಳನ್ನು ಗೌರವಿಸುವ ಮೂಲಕ ಗುರುವಂದನಾ ಕಾರ್ಯಕ್ರಮ ಆಚರಿಸಲಾಯಿತು.
ಪ್ರಸ್ತುತ ವರ್ಷ ಸಂಘವು ದಶಮಾನೋತ್ಸವವನ್ನು ಆಚರಿಸುತ್ತಿದ್ದು, ಸಂಘದ ಪ್ರಥಮ ತೈಮಾಸಿಕ ಸಭೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಕಾರ್ಯಕಾರಿ ಅಧ್ಯಕ್ಷ ರಕ್ಷಿತ್ ಬೊಳ್ಳೂರು, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್., ಕಾರ್ಯದರ್ಶಿ ಸುಶಾಂತ್ ಅಜ್ಜಿಕಲ್ಲು, ಯಶವಂತ, ಯೂರೇಶ್ ಕೊಪ್ಪಡ್ಕ, ಪೂರ್ಣಿಮ ಚೊಕ್ಕಾಡಿ, ಲೋಹಿತ್ ರೆಂಜಳ, ಚರಿತ್ ರೈ, ಅಚಲ್ ಬಿಳಿನೆಲೆ, ಅಂಶಲ್ ಬಿಳಿನೆಲೆ ಮೊದಲಾದವರು ಉಪಸ್ಥಿತರಿದ್ದರು.
























