ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದ ಹಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ತಿಮರೋಡಿ ಬಂಧನದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಯನ್ನು ನಾವು ನೀಡುವುದಿಲ್ಲ. ಸರ್ಕಾರ ಕಾನೂನಿನನ್ವಯ ಕ್ರಮ ಕೈಗೊಂಡಿದ್ದು, ಇದರಲ್ಲಿ ನಾವು ಮಧ್ಯಪ್ರವೇಶ ಮಾಡುವ ಮಾತಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತಿಮರೋಡಿಯನ್ನು ಬ್ರಹ್ಮಾವರದ ಪೊಲೀಸರು ಬಂಧಿಸಿರುವುದಾಗಿದೆ.
























