ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರು ತಿಂಗಳಲ್ಲಿ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ 100ನೇ ಬಾರಿಗೆ ದೇವಾಲಯಕ್ಕೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


2017ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸರಾಸರಿ 21 ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಬಂದು ಬಾಬಾ ವಿಶ್ವನಾಥನ ಆರಾಧನೆ ಹಾಗೂ ಷೋಡಶೋಪಚಾರ ವಿಧಾನದ ಮೂಲಕ ರಾಜ್ಯದ ಹಾಗೂ ದೇಶದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.

ಸಿಎಂ ಯೋಗಿ ತಿಂಗಳಿಗೊಮ್ಮೆಯಾದರೂ ಕಾಶಿಗೆ ಭೇಟಿ ನೀಡುತ್ತಿದ್ದು, ಪ್ರತಿ ಭೇಟಿಯಲ್ಲೂ ನಗರದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಕ್ಷೇತ್ರ ಪರಿಶೀಲನೆ ನಡೆಸುತ್ತಿದ್ದಾರೆ. ಸನಾತನ ಧರ್ಮ ಮತ್ತು ಬಾಬಾ ವಿಶ್ವನಾಥರ ಮೇಲಿನ ಅಪಾರ ಭಕ್ತಿಗೆ ಸಿಎಂ ಯೋಗಿ ಅವರ ಭೇಟಿಯೇ ಸಾಕಷ್ಟು ಪುರಾವೆ ಎನ್ನುತ್ತಾರೆ ಕಾಶಿ ವಿಶ್ವನಾಥ ದೇವಸ್ಥಾನದ ಅರ್ಚಕ ನೀರಜ್ ಕುಮಾರ್ ಪಾಂಡೆ.





























 
 

ಕಳೆದ ವರ್ಷ ಸೆಪ್ಟೆಂಬರ್ 9 ರಂದು, ಮುಖ್ಯಮಂತ್ರಿಗಳು ವಾರಣಾಸಿಗೆ 100 ನೇ ಬಾರಿಗೆ ಭೇಟಿ ನೀಡಿದಾಗ ಅವರು 88 ನೇ ಬಾರಿಗೆ ಶ್ರೀಕಾಶಿ ವಿಶ್ವನಾಥ ಧಾಮಕ್ಕೆ ಭೇಟಿ ನೀಡಿದ್ದರು. ಅಂದಿನಿಂದ ಮಾರ್ಚ್ 18 ರವರೆಗೆ ಮುಖ್ಯಮಂತ್ರಿಗಳು 12 ಬಾರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


100ನೇ ಬಾರಿಗೆ ಕಾಲಭೈರವ ದೇವಸ್ಥಾನದಲ್ಲಿ ಸಿಎಂ ಪ್ರಾರ್ಥನೆ ಸಲ್ಲಿಸಿದರು. ಸಿಎಂ ಯೋಗಿ ಶ್ರೀಕಾಶಿ ವಿಶ್ವನಾಥ ದೇವಸ್ಥಾನದಲ್ಲಿ 100 ಬಾರಿ ಪೂಜೆ ಸಲ್ಲಿಸಿ ಇತಿಹಾಸ ಸೃಷ್ಟಿಸಿದ್ದಲ್ಲದೆ, ಕಳೆದ ಆರು ವರ್ಷಗಳಲ್ಲಿ 100 ಬಾರಿ ಕಾಲಭೈರವನ ದೇವಸ್ಥಾನಕ್ಕೆ ಭೇಟಿ ನೀಡಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top